ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ > ಮಾಧ್ಯಮಗಳಲ್ಲಿ > ತಿಮ್ಲಾಪುರದಲ್ಲಿ ವಿಶ್ವಭೂಮಿ ದಿನಾಚರಣೆ

ತಿಮ್ಲಾಪುರದಲ್ಲಿ ವಿಶ್ವಭೂಮಿ ದಿನಾಚರಣೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಜಲಶಕ್ತಿ ಅಭಿಯಾನ ಕುರಿತು ತಿಮ್ಲಾಪುರ ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ನೀರಿನ ಸಂರಕ್ಷಣೆ ಕುರಿತು ಘೋಷಣೆಗಳನ್ನು ಕೂಗುತ್ತಾ ಗ್ರಾಮಸ್ಥರಲ್ಲಿ ಅರಿವನ್ನು ಮೂಡಿಸಲಾಯಿತು. ಈ ಸಂದರ್ಭದಲ್ಲಿ ನೀರು ಪೋಲಾಗುತ್ತಿರುವದನ್ನು ಗುರುತಿಸಿ ಅದನ್ನು ತಡೆಗಟ್ಟುವ ಕುರಿತು ಗ್ರಾಮಸ್ಥರಲ್ಲಿ ಜಾಗೃತಿಯನ್ನು ಕೂಡ ನೀಡಲಾಯಿತು. ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿಯಾದ ಕುಬೇರಪ್ಪ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಗಜಾನನ ಜೋಶಿ ಯವರು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶಿವಕುಮಾರ್ ಜಿ ಎಸ್, ಬೋಧಕ ಬೋಧಕೇತರ ಸಿಬ್ಬಂದಿಯವರು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.